Sunday, March 1, 2009

ಸಾವು‏

ಸಾವೇಕೆ ಬರ್ತಾಯಿಲ್ಲಾ ?

ಬಹುಷಃ ಕರ್ಮಗಳಿನ್ನೂ ಕಳೆದಿಲ್ಲ.

ಕರ್ಮಗಳೇಕೆ ಸಾವಿಗೆ ಆಧಾರವಾಗಿ ನಿಂತಿವೆ?

ಅದು ಬ್ರಹ್ಮನಿಗೂ ಸರಿಯಾಗಿ ತಿಳಿದಿಲ್ಲ.


ಪ್ರಯತ್ನಿಸಿದರೊಂದು ಬಾರಿ ಬಾಳೇಗೆ ಮೊನಚುವುದು?

ಕೊನೆವರೆಗೂ ಅದು ಹೇಡಿಯಾಗಿಯೇ ಉಳಿಯುವುದು.

ಹಾಗಾದರೆ ಹೇಡಿಗಳೇಕೆ ಬದುಕುವುದಿಲ್ಲ ?

ಜೀವನವನ್ನು ಸಾಗಿಸಲು ಬಾರದೇ ಸತ್ತಿದ್ದೆಲ್ಲ.


ನಿರಂತರ ಬದುಕಿನೊಳು ಮುಳ್ಳು-ಕಲ್ಲುಗಳೇ ಮೇಲೇಕೆ?

ನಂಬಿಕೆ ಛಲವೆರಡಿಟ್ಟು ದಾಟಿ ಬಾ ಎನಲಿಕ್ಕೆ.

ದಾಟಿ ಬರುವ ಸಮಯದಲಿ ಎಷ್ಟೋ ಜನ ಎಡವಿ ಬಿದ್ದದ್ದೇಕೆ?

ಅವರಿನ್ನೂ ಅದರಲ್ಲಿ ಪರಿಣಿತರಾಗದಿದ್ದುದ್ದಕ್ಕೆ.


ತಿಂದ ಮೇಲೆ ನೀರು ಕುಡಿಯಲೇಬೇಕು ಎನುವುದೇಕೆ?

ಇಳಿಯದಿದ್ದರೆ ಕೆಡಕಾಗುವುದು ಎನುವುದಕ್ಕೆ.

ಹಾಗಾದರೆ ಹಣ ತಿನ್ನುವವರು ಹೆಚ್ಚಿದರೇತಕೆ?

ಹಣವಿಲ್ಲದೆ ಹುಲ್ಲು ಕಡ್ಡಿಯೂ ಅಲ್ಲಾಡುವುದಿಲ್ಲವದಕ್ಕೆ.


ಕಷ್ಟ ಅನ್ನೋದು ಬರೀ ಮನುಷ್ಯರಿಗೇ ಇರೋದು ಅನುವುದೇತಕೆ?

ಪ್ರಾಣಿ-ಪಕ್ಷಿ-ಗಿಡ-ಮರಗಳಿಗೆ ಹೇಳಲಾಗುವುದಿಲ್ಲವಲ್ಲ ಅದಕ್ಕೆ.

ಆದರೂ ಸಾವು ಬರುತ್ತಾ ಇಲ್ಲ ಏತಕ್ಕೆ?

ತಾನಾಗಿಯೆ ಬರುವ ಸಾವಿಗೆ ಸೂಕ್ತ ಉತ್ತರ ಇದೆ ಅದಕ್ಕೆ.

3 comments:

  1. This comment has been removed by a blog administrator.

    ReplyDelete
  2. This comment has been removed by a blog administrator.

    ReplyDelete
  3. This comment has been removed by a blog administrator.

    ReplyDelete